Latest

ಬ್ರೇನ್ ಸ್ಟ್ರೋಕ್ ಗೆ ಒಳಗಾಗಿದ್ದ ಸ್ಯಾಂಡಲ್ ವುಡ್ ನಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಚಿರಂಜೀವಿ ಸರ್ಜಾ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಿಗೆ ಕಳೆದ ಮೂರು ದಿನಗಳ ಹಿಂದೆ ಬ್ರೇನ್ ಸ್ಟ್ರೋಕ್ ಕೂಡ ಆಗಿತ್ತು ಎಂದು ತಿಳಿದುಬಂದಿದೆ.

ಚಿರಂಜೀವಿ ಸರ್ಜಾ ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬ್ರೇನ್ ಸ್ಟ್ರೋಕ್ ಆಗಿತ್ತು. ಈ ಹಿನ್ನಲೆಯಲ್ಲಿ ಮೂರು ದಿನದ ಹಿಂದೆ ಅವರು ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು.

ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಾ ಆರಾಮವಾಗಿದ್ದ ಚಿರುಗೆ ಇಂದು ಮಧ್ಯಾಹ್ನ ಏಕಾಏಕಿ ಪಿಡ್ಸ್ ಬಂದಿದೆ. ತಕ್ಷಣ ಮನೆಯವರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಆಸ್ಪತ್ರೆಗೆ ಆಗಮಿಸುವಷ್ಟರಲ್ಲೇ ಮಾರ್ಗಮಧ್ಯೆಯೇ ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button