National

*ಆಂದ್ರ ಸಿಎಂ ಆಗಿ ಚಂದ್ರಬಾಬು ನಾಯ್ದು, ಡಿಸಿಎಂ ಆಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯದ್ಸ್ಥ ಚಂದ್ರಬಾಬು ನಾಯ್ಡು ಪ್ರಮಣವಚನ ಸ್ವೀಕರಿಸಿದ್ದಾರೆ.

Home add -Advt

ಹೈದರಾಬಾದ್ ನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಅಬ್ದುಲ್ ನಜೀರ್ ನೂತನ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಚಂದ್ರಬಾಬು ನಾಯ್ಡು ನಾಲ್ಕನೇ ಬಾರಿಗೆ ಆಂಧ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇದೇ ವೇಳೆ ನಟ ಪವನ್ ಕಲ್ಯಾನ್ ಉಪಮುಖ್ಯಮಂತ್ರಿಯಾಗಿ ಹಾಗೂ ಚಂದ್ರಬಾಬು ನಾಯ್ಡು ಪುತ್ರ ನಾರಾಲೋಕೇಶ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು.

Related Articles

Back to top button