Karnataka NewsLatestPolitics

*ಧರ್ಮಸ್ಥಳ ಪ್ರಕರಣ ಸ್ಫೋಟಕ ಹೇಳಿಕೆ ನೀಡಿದ ಜನಾರ್ಧನ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ್ದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ, ಮಾಜಿ ಸಚಿವ ಜನಾರ್ಧನ ರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ಧರ್ಮಸ್ಥಳ ಪ್ರಕರಣದಲ್ಲಿ ತಮಿಳುನಾಡಿನ ಕಾಂಗ್ರೆಸ್ ಸಂಸದ ಹಾಗೂ ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Home add -Advt

ಸಸಿಕಾಂತ್ ಸೆಂಥಿಲ್ ಮೂಲಕ ಷಡ್ಯಂತ್ರ ನಡೆಯುತ್ತಿದೆ. ಮುಸುಕುಧಾರಿಯೂ ಕೂಡ ತಮಿಳುನಾಡು ಮೂಲದವನು. ಮುಸುಕುಧಾರಿ ಇಷ್ಟುವರ್ಷ ತಮಿಳುನಾಡಿನಲ್ಲಿಯೇ ವಾಸವಾಗಿದ್ದ. ತಮಿಳುನಾಡಿನ ಆ ವ್ಯಕ್ತಿಗೂ, ಸಸಿಕಾಂತ್ ಸೆಂಥಿಲ್ ಗೂ ನಂಟಿದೆ. ಧರ್ಮಸ್ಥಳ ಕೇಸ್ ಸಂಬಂಧ ಎಸ್ ಐಟಿ ತನಿಖೆಯಿಂದ ಸತ್ಯ ಹೊರಬರಲ್ಲ. ಸಿಬಿಐ ಅಥವಾ ಎನ್ ಐಎಯಿಂದ ತನಿಖೆಯಾಗಬೇಕು ಎಂದಿದ್ದಾರೆ.

ಅಲ್ಲದೇ ನ್ಯಾಯಕ್ಕಾಗಿ ನಾನು ಕೋರ್ಟ್ ಮೊರೆ ಹೋಗುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಅಡಿ ದೂರು ನೀಡುತ್ತೇನೆ ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ.

Related Articles

Back to top button