Kannada NewsKarnataka News

ಬಿಜೆಪಿ ಮುಖಂಡ, ಪೊಲೀಸ್ ಅಧಿಕಾರಿ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ –  ಬೆಳಗಾವಿ ತಾಲೂಕಿನ ಮಚ್ಛೆಯ ನೆಹರು ನಗರದಲ್ಲಿ ವ್ಯಕ್ತಿಯೊಬ್ಬ ಬಿಜೆಪಿ ಮುಖಂಡರೊಬ್ಬರ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಾವಿಯೋ ಪಿಳೈ (28) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾವಿಯೋ ಪಿಳೈ ಡೆತ್ ನೋಟ್ ಬರೆದಿಟ್ಟಿದ್ದು, ಕ್ಯಾಂಪ್ ಠಾಣೆಯ ಪಿಎಸ್‌ಐ ಹಾಗೂ ಬಿಜೆಪಿ ಮುಖಂಡನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದ. ಆದರೆ ಇವರಿಬ್ಬರ ನಡುವೆ ಮನಸ್ತಾಪವಾಗಿ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಬಿಜೆಪಿ ಮುಖಂಡ ಹಾಗೂ ಕ್ಯಾಂಪ್ ಪಿಎಸ್‌ಐ 1.50 ಲಕ್ಷ ಹಣ ಪಡೆದಿದ್ದಾರೆ. ಇನ್ನೂ ಹೆಚ್ಚಿನ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಸಾವಿಯೋ ಆರೋಪಿಸಿದ್ದಾರೆ.
  ಸಾವಿಯೋ ತಂದೆ ವಿನ್ಸೆಂಟ್ ಪಿಳ್ಳೈ ನೀಡಿದ ದೂರಿನ ಆಧಾರದಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಾಗೂ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತನಿಖೆಯ ವೇಳೆ ಡೆತ್‌ನೋಟ್ ವಿಷಯ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದ ಕುರಿತೂ ತನಿಖೆ ನಡೆಯಲಿದೆ ಎಂದು ಪೊಲೀಸ್ ಆಯುಕ್ತ ಡಾ. ಎಂ. ಬಿ. ಬೋರಲಿಂಗಯ್ಯ ತಿಳಿಸಿದ್ದಾರೆ.

https://pragati.taskdun.com/latest/leopard-escapes-from-belgaum-official-decision-announced-by-forest-department/

 

https://pragati.taskdun.com/karnataka-news/education-karnataka-news/22-schools-start-from-september-5-ddpi-basavaraja-nalatwada/

 

Home add -Advt

https://pragati.taskdun.com/latest/bjp-leaderanataraju-suicide-casedeath-notereveal/

Related Articles

Back to top button