Karnataka NewsLatest
ರಮೇಶ ಜಾರಕಿಹೊಳಿಗೆ ಮತ್ತೊಂದು ಹುದ್ದೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರನ್ನು ಕರ್ನಾಟಕ ನೀರಾವರಿ ನಿಗಮ ನಿಯಮಿತ ಮಂಡಳಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಕರ್ನಾಟಕ ನೀರಾವರಿ ನಿಗಮ ನಿಯಮಿತದ ನಿರ್ದೇಶಕರ ಮಂಡಳಿಯ ಉಪಾಧ್ಯಕ್ಷರನ್ನಾಗಿ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಜಲ ಸಂಪನ್ಮೂಲ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಅವರಾದ ರವೀಂದ್ರ ಕೊಂಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




