
ಪ್ರಗತಿವಾಹಿನಿ ಸುದ್ದಿ: ಯುಜಿಸಿಇಟಿ-2025ರ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಫಲಿತಾಂಶ ಪ್ರಕಟಿಸಿದ್ದಾರೆ.
ಸಿಇಟಿಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿಗೆ ಹಾಜರಾಗಿದ್ದರು ಎಂದು ಸಚಿವರು ತಿಳಿಸಿದರು.
ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತನ್ಯ ಸಿಬಿಎಸ್ ಸಿ ಶಾಲೆಯ ಭವೇಶ್ ಜಯ್ಂತಿ (98.67%) ಮೊದಲ ರ್ಯಾಂಕ್ ಗಳಿಸಿದ್ದಾರೆ.
ಚೈತನ್ಯ ಟೆಕ್ನೋ ಸ್ಕೂಲ್ ಉತ್ತರಹಳ್ಳಿ ವಿದ್ಯಾರ್ಥಿ ಸಾತ್ವಿಕ್ ಬಿರಾದಾರ್ (99.33%) ಎರಡನೇ ರ್ಯಾಂಕ್ ಗಳಿಸಿದ್ದಾರೆ
ದಿನೇಶ್ ಗೋಮತಿ ಶಂಕರ್ ಅರುಣಾಚಲಮ್ ಮೂರನೇ ರ್ಯಾಂಕ್ ಪಡೆದಿದ್ದಾರೆ.
cetonline.karnataka.gov.in ಮತ್ತು karresults.nic.inನಲ್ಲಿ ಫಲಿತಾಂಶ ಲಭ್ಯವಿದೆ.