Latest

ಚಾಕುವಿನಿಂದ ಇರಿದು, ಬೆಂಕಿ ಹಚ್ಚಿ ಬಾಲಕನನ್ನು ಕೊಂದ ಪಾಪಿಗಳು

ಪ್ರಗತಿವಾಹಿನಿ ಸುದ್ದಿ; ಬೀದರ್: ಬಾಲಕನೊಬ್ಬನನ್ನು ಮನಬಂದಂತೆ ಚಾಕುವಿನಿಂದ ಇರಿದು, ಬಳಿಕ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಭೀಕರ ಘಟನೆ ಬೀದರ್ ಜಿಲ್ಲೆಯ ಔರಾದ್ ನ ಕೊಟಗ್ಯಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಶಿವಕುಮಾರ್ ಗೋಡೆ (17) ಕೊಲೆಯಾದ ದುರ್ದೈವಿ. ಬಾಲಕನನ್ನು ಚಾಕುವಿನಿಂದ ಇರಿದು, ಬೆಂಕಿಯಲ್ಲಿ ಸುಟ್ಟು ಹತ್ಯೆಗೈಯ್ಯಲಾಗಿದೆ. ಕೃತ್ಯದ ಹಿಂದಿನ ಕಾರಣ ತಿಳಿದುಬಂದಿಲ್ಲ.

ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.

Home add -Advt

Related Articles

Back to top button