Latest

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್ ಟೇಬಲ್

ಪ್ರಗತಿವಾಹಿನಿ ಸುದ್ದಿ; ದೇವನಹಳ್ಳಿ: ಪ್ರಕರಣದಿಂದ ಬಿಡುಗಡೆ ಮಾಡಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ದೇವನಹಳ್ಳಿಯ ವಿಜಯಪುರ ಠಾಣೆ ಪೊಲೀಸ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಂದ್ರಶೇಖರ್ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್ ಟೇಬಲ್ . ಮಂಜುನಾಥ್ ಎಂಬ ವ್ಯಕ್ತಿ ಹಾಗೂ ಆತನ ಸಓದರಿ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು. ಮಂಜುನಾಥ್ ಎಂಬುವವರನ್ನು ವಿಚಾರಣೆಗೆ ಎಂದು ಠಾಣೆಗೆ ಕರೆತಂದಿದ್ದ ಪೊಲಿಸರು ಠಾಣೆಯಲ್ಲಿಯೇ ಕೂರಿಸಿದ್ದರು.

Home add -Advt

ಬಿಡುಗಡೆಯಾಗಿ ಹೊರಹೋಗಬೇಕು ಎಂದರೆ 3 ಲಕ್ಷದ 10 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಕಾನ್ಸ್ ಟೇಬಲ್ ಬೇಡಿಕೆ ಇಟ್ಟಿದ್ದ. ಮುಂಗಡವಾಗಿ 30 ಸಾವಿರ ರೂಪಾಯಿ ಹಣ ಪಡೆಯುವಾಗ ಖಚಿತ ಮಾಹಿತಿ ಮೆರೆಗೆ ಲೋಕಾಯುಕ್ತ ಅಧಿಕಾರಿಗಳು ಠಾಣೆ ಮೇಲೆ ದಾಳಿ ನಡೆಸಿದ್ದು, ಕಾನ್ಸ್ ಟೇಬಲ್ ಚಂದ್ರಶೇಖರ್ ನನ್ನು ವಶಕ್ಕೆ ಪಡೆದಿದ್ದಾರೆ.

ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ಗೋಪಾಲಸ್ವಾಮಿ ಆನೆ ಸಾವು; ಸಿಎಂ ಟ್ವೀಟ್ ಮೂಲಕ ಸಂತಾಪ

https://pragati.taskdun.com/gopalaswamys-elephantdeathparticipating-in-dussehra-celebrationscondolences-cm-basavaraj-bommai/

Related Articles

Back to top button