Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಸಿಲಿಂಡರ್ ಅಭಾವ: ನಡು ರಸ್ತೆಯಲ್ಲಿ ಸಿಲಿಂಡರ್ ಇಟ್ಟು ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಎಲ್ಲಡೆ ಬೀರಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗದ ಕಾರಣ ಜನ ರೊಚ್ಚಿಗೆದ್ದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.‌

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಸಿಲಿಂಡರ್ ಸಿಗದ ಕಾರಣ ಕಂಗಾಲಾದ ಜನ ರೊಚ್ಚಿಗೆದ್ದು  ನಡುರಸ್ತೆಯಲ್ಲೇ ಸಿಲಿಂಡರ್ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. 

Home add -Advt

ಕಳೆದೊಂದು ತಿಂಗಳಿನಿಂದ ಬುಕ್ ಮಾಡಿದರು ಸಿಲಿಂಡರ್ ಸಿಗುತ್ತಿಲ್ಲ. ಸಿಲಿಂಡರ್ ಕಚೇರಿಗೆ ಹೋದರು ಯಾರು ಕ್ಯಾರೆ ಎನ್ನುತ್ತಿಲ್ಲ. ಹೆಚ್ಚಿನ ಹಣ ಕೊಟ್ಟವರಿಗೆ ಮಾತ್ರ ಸಿಲಿಂಡರ್ ಕೊಡಲಾಗುತ್ತಿದೆ. ನಮಗೆ ನಾಳೆ ಬಾ ನಾಳೆ ಎನ್ನುತ್ತಿದ್ದಾರೆ ಎಂದು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ

.

Related Articles

Back to top button