Kannada NewsKarnataka NewsLatest

*ತುಂಗಭದ್ರಾ ನದಿಯಲ್ಲಿ ತೇಲಿಬಂದ ಮೃತದೇಹ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಈ ನಡುವೆ ತುಂಗಭದ್ರಾ ನದಿಯಲ್ಲಿ ಮೃತದೇಹವೊಂದು ತೇಲಿ ಬಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.

ಧಾರಾಕಾರ ಮಳೆಯಿಂದಾಗಿ ತುಂಗಭದ್ರಾ ನದಿ ಅಪಾಯದಮಟ್ಟದಲ್ಲಿ ಹರಿಯುತ್ತಿದೆ. ದಾವಣಗೆರೆ ಜಿಲ್ಲೆಯ ಹರಿಹರ ನಗರದ ರಾಘವೇಂದ್ರ ಮಠದ ಬಳಿ ನದಿಯಲ್ಲಿ ಮೃತದೇಹ ತೇಲಿ ಬಂದಿದೆ.

ಪುರುಷರೊಬ್ಬರ ಮೃತದೇಹ ನದಿಯಲ್ಲಿ ತೇಲಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ನದಿಯಿಂದ ಮೇಲಕೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನಷ್ಟೇ ಮೃತದೇಹದ ಗುರುತು ಪತ್ತೆಯಾಗಬೇಕಿದೆ.


Home add -Advt

Related Articles

Back to top button