
ಪ್ರಗತಿವಾಹಿನಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಶೌರ್ಯ ಮತ್ತು ನಾಯಕತ್ವಕ್ಕಾಗಿ ರಾಷ್ಟ್ರೀಯ ರೈಫಲ್ಸನ್ 50 ನೇ ಬೆಟಾಲಿಯನ್ನ ಮೇಜರ್ ಆಶಿಶ್ ದಹಿಯಾ ಅವರಿಗೆ ಶೌರ್ಯ ಚಕ್ರವನ್ನು ನೀಡಲಾಗಿದೆ.
ರಾಷ್ಟ್ರಪತಿ ದೌಪದಿ ಮುರ್ಮು ಅವರು 6 ಕೀರ್ತಿ ಚಕ್ರಗಳು ಹಾಗೂ 33 ಶೌರ್ಯ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
2022 ರ ಜೂನ್ ತಿಂಗಳಿನಿಂದ ಐದು ಹೈ-ರಿಸ್ಕ್ ಕಾರ್ಯಾಚರಣೆಗಳಲ್ಲಿ ನಾಲ್ಕು ಭಯೋತ್ಪಾದಕರನ್ನು ಹತ್ಯೆ ಮಾಡುವಲ್ಲಿ ಹಾಗೂ ಮೂರು ಸುಧಾರಿತ ಸ್ಪೋಟಕ ಸಾಧನಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಆಶಿಶ್ ಪಾತ್ರವನ್ನು ಗೌರವಿಸುವ ಮೂಲಕ ಈ ಪ್ರಶಸ್ತಿಯನ್ನು ನೀಡಲಾಗಿದೆ.
2024 ರ ಜೂನ್ 02 ರಂದು ಮೇಜರ್ ದಹಿಯಾ ಪುಲ್ವಾಮಾ ಜಿಲ್ಲೆಯ ಹಳ್ಳಿಯಲ್ಲಿ ಎಚ್ಚರಿಕೆಯಿಂದ ಯೋಜಿಸಲಾದ ಕಾರ್ಯಾಚರಣೆಯನ್ನು ಮುನ್ನಡೆಸಿದರು. ಆರಂಭಿಕ ಹುಡುಕಾಟದ ಸಮಯದಲ್ಲಿ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸುವ ಮೂಲಕ ಮತ್ತು ಗ್ರೆನೇಡ್ಗಳನ್ನು ಎಸೆಯುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಮೇಜರ್ ದಹಿಯಾ ನಿಖರವಾಗಿ ಪ್ರತಿದಾಳಿ ನಡೆಸಿದರು, ಓಡಿಹೋಗುತ್ತಿದ್ದ ಭಯೋತ್ಪಾದಕನೊಬ್ಬ ತೀವ್ರವಾಗಿ ಗಾಯಗೊಂಡಿದನು.