Latest

ವಿದ್ಯಾರ್ಥಿನಿ ಮೊಬೈಲ್ ಗೆ ಕಿಡಿಗೇಡಿ ಮೆಸೇಜ್; ಶಿಕ್ಷಕ ಅಮಾನತು

ಪ್ರಗತಿವಾಹಿನಿ ಸುದ್ದಿ, ಮಧುಗಿರಿ: ವಿದ್ಯಾರ್ಥಿನಿ ಮೊಬೈಲ್ ಗೆ ಕಿಡಿಗೇಡಿತನದ ಸಂದೇಶಗಳನ್ನು ರವಾನಿಸುತ್ತಿದ್ದ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.

ತಾಲೂಕಿನ ದೊಡ್ಡೇರಿ ಹೋಬಳಿಯ ಕೊಟಗಾರಲಹಳ್ಳಿ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಪಿ. ನಾಗಭೂಷಣ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ.ಜಿ. ರಂಗಯ್ಯ ಆದೇಶ ಹೊರಡಿಸಿದ್ದಾರೆ.

Home add -Advt

ನಿರ್ದಿಷ್ಟ ವಿದ್ಯಾರ್ಥಿನಿಗಾಗಿ ತಲೆಕೆಡಿಸಿಕೊಂಡಂತೆ ವರ್ತಿಸುತ್ತಿದ್ದ ಶಿಕ್ಷಕ ಆಕೆ ಪರೀಕ್ಷೆಯಲ್ಲಿ ತಾನೇ ಉತ್ತರ ಬರೆದುಕೊಟ್ಟು ಓಲೈಸಲು ಪ್ರಯತ್ನಿಸುತ್ತಿದ್ದರು. ಇದಲ್ಲದೆ ವಿದ್ಯಾರ್ಥಿನಿಯ ಮೊಬೈಲ್ ಗೆ ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದರು.

ಈ ಕಾರಣಕ್ಕೆ ಶಾಲಾ ಮುಖ್ಯಶಿಕ್ಷಕರು ನಾಗಭೂಷಣ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದರು. ಇದಕ್ಕೆ ಪ್ರತಿಯಾಗಿ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿರುವ ನಾಗಭೂಷಣ ವರ್ತನೆಗಳನ್ನು ತಿದ್ದಿಕೊಳ್ಳುವ ಭರವಸೆ ನೀಡಿದ್ದಾರೆನ್ನಲಾಗಿದೆ.

ಆದರೆ ಶಿಕ್ಷಕನ ಈ ವರ್ತನೆಗಿಂದ ಮುಂದೆಯೂ ತೊಂದರೆಗಳಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಕಾಯ್ದಿರಿಸಿದ ಡಿಡಿಪಿಐ ಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ.

ಟರ್ಕಿಯಲ್ಲಿ ಭಾರತೀಯ ಸೇನಾ ಕಾರ್ಯಕ್ಕೆ ಭರಪೂರ ಪ್ರಶಂಸೆ

https://pragati.taskdun.com/indian-armys-performance-in-turkey-is-much-appreciated/

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರನಿಂದ ಜೀವ ಬೆದರಿಕೆ, ಪೋಲಿಸ್ ರಿಗೆ ಪತ್ರ ಬರೆದ ಸಂಜಯ್ ರಾವುತ್

https://pragati.taskdun.com/chief-minister-eknath-shindes-son-threatened-his-life-sanjay-raut-wrote-a-letter-to-the-police/

ಬೆಳಗಾವಿ ಜಿಲ್ಲೆಯಲ್ಲಿ 5 ದಿನ ಸಿದ್ದರಾಮಯ್ಯ ಪ್ರಜಾಧ್ವನಿ ಯಾತ್ರೆ

https://pragati.taskdun.com/5-days-siddaramaiah-prajadhwani-yatra-in-belgaum-district/

 

Related Articles

Back to top button