Belagavi NewsBelgaum NewsKannada NewsKarnataka News
*ರಾಜ್ಯದ ವಿವಿಧೆಡೆ ಮುಂದಿನ 3 ದಿನ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧೆಡೆ ಮುಂದಿನ 3 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ಮಳೆ ಜೋರಾಗಲಿದೆ ಎಂದು ತಿಳಿದು ಬಂದಿದ್ದು ಪಕ್ಕದ ರಾಜ್ಯ ತಮಿಳುನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲೂ ಮಳೆ ಆರ್ಭಟ ಜೋರಾಗಲಿದೆ.
ಬೆಂಗಳೂರಲ್ಲೂ ಮೂರು ದಿನ ಇದೇ ರೀತಿ ವಾತಾವರಣ ಇರಲಿದೆ. ಬುಧವಾರ ಬೆಳಗ್ಗೆಯಿಂದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಜೋರು ಮಳೆ ಆಗಲಿದೆ. ಭಾರೀ ಮಳೆ ಮುನ್ಸೂಚನೆ ಕಾರಣ ಕಟ್ಟೆಚ್ಚರ ವಹಿಸಲಾಗಿದೆ.



