Kannada NewsKarnataka NewsLatestPolitics

*ಡಾಕ್ಟರ್ ಗೆ ಕೊರೊನಾ ಸೋಂಕು; ಸಚಿವ ಎಂ.ಸಿ.ಸುಧಾಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಮಾಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ವೈದ್ಯರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ 64 ವರ್ಷದ ಮೂಳೆತಜ್ಞರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

Home add -Advt

ಜಿಲ್ಲೆಯಾದ್ಯಂತ ಟೆಸ್ಟಿಂಗ್ ಮಾಡಲಾಗುತ್ತಿದೆ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವೈದ್ಯರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವೈದ್ಯರ ಸಂಪರ್ಕದಲ್ಲಿರುವವರಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


Related Articles

Back to top button