Belagavi NewsBelgaum NewsKannada NewsKarnataka News

ಅಥಣಿ: ಕಾಂಗ್ರೆಸ್ ಮುಖಂಡ ಅಣ್ಣಪ್ಪ ನಿಂಬಾಳ್ ಮರ್ಡರ್

ಪ್ರಗತಿವಾಹಿನಿ ಸುದ್ದಿ, ಅಥಣಿ : ಶಾಸಕ ಲಕ್ಷ್ಮಣ ಸವದಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಖಿಳೇಗಾಂವ್ ಗ್ರಾಮದ ಅಣ್ಣಪ್ಪ ನಿಂಬಾಳ (58) ಎನ್ನುವವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಬುಧವಾರ ಸಂಜೆ ದೇವಸ್ಥಾನದಿಂದ ಬರುವಾಗ 5 -6 ಜನ ಮುಸುಕುದಾರಿಗಳ ಗುಂಪು ನಿಂಬಾಳ ಅವರನ್ನು ರಸ್ತೆಯಲ್ಲೇ ನಿರ್ಧಯವಾಗಿ ಕೊಚ್ಚಿ ಹಾಕಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕೆಲವೇ ಕ್ಷಣಗಳಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Home add -Advt

ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸುದ್ದಿ ತಿಳಿದ ತಕ್ಷಣ ಶಾಸಕ ಲಕ್ಷ್ಮಣ ಸವದಿ ಆಸ್ಪತ್ರೆಗೆ ಧಾವಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

Back to top button