
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಿಂಡಲಗಾ ಗ್ರಾಮದ ಕಲ್ಮೇಶ್ವರ ನಗರದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ ಹಣ ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಸಂಜೆ ಭೂಮಿ ಪೂಜೆಯನ್ನು ನಡೆಸಿ ಚಾಲನೆ ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಆನಂದ ಪಾಟೀಲ, ನಿಖಿಲ ಮಾಸೇಕರ್, ಸಂದೀಪ ಮೊರೆ, ಗಜು ಕಾಕತ್ಕರ್, ರಾಗೋಜಿ, ಪಾಟೀಲ, ಗ್ರಾಮ ಪಂಚಾಯತ್ ಸದಸ್ಯರಾದ ರಾಮಚಂದ್ರ ಕುದುರೆಮನಿಕರ್, ವಿಠ್ಠಲ ದೇಸಾಯಿ, ಅಶೋಕ ಕಾಂಬಳೆ, ರಾಹುಲ್ ಉರನಕರ್, ಪ್ರವೀಣ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
https://pragati.taskdun.com/d-k-shivakumarprajadhwanikollegala/