Latest

*ಮತ್ತೊಂದು ಭೀಕರ ಅಪಘಾತ; ನವದಂಪತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಭೀಕರ ಅಪಘಾತದಲ್ಲಿ ನವದಂಪತಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ.

ಹೊನಮಲ್ಲ ತೆರದಾಳ (31) ಹಾಗೂ ಗಾಯತ್ರಿ (24) ಮೃತ ದಂಪತಿ. ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಹೊನಮಲ್ಲ ಹಾಗೂ ಗಾಯತ್ರಿ ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಬೈಕ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

Home add -Advt

ಅಪಘಾತದಲ್ಲಿ ನವಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button