
ಪ್ರಗತಿವಾಹಿನಿ ಸುದ್ದಿ: ಪಾಕಸ್ತಾನ ಕಳೆದ ಎರಡು ದಿನಗಳಿಂದ ಪೂಂಚ್ ಸೆಕ್ಟರ್ ನಲ್ಲಿ ಶೆಲ್ ದಾಳಿ ನಡೆಸುತ್ತಿದ್ದು, ಈ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ವೀರ ಮರಣವನ್ನಪ್ಪಿದ್ದಾರೆ.
ಎರಡು ದಿನಗಳಿಂದ ನಿರಂತರವಾಗಿ ಶೆಲ್ ದಾಳಿ ಮಾಡಲಾಗುತ್ತಿದೆ. ಈ ದಾಳಿಯಲ್ಲಿ ಇದುವರೆಗೆ 31 ಜನ ಅಮಾಯಕರು ಮೃತಪಟ್ಟಿದ್ದಾರೆ.
ಪಾಕ್ ಈ ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡುವ ವೇಳೆ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಅವರಿಗೆ ಗುಂಡೇಟು ತಗುಲಿದ್ದು ಕೊನೆಯುಸಿರಿರುವವರೆಗೂ ಧೈರ್ಯದಿಂದ ಹೋರಾಡಿ ವೀರ ಮರಣವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ದೃಢಪಡಿಸಿದೆ.