Kannada NewsKarnataka NewsLatest

*ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

2023-24ನೇ ಸಾಲಿನ ಬಜೆಟ್ ಮಂಡನೆ ವೇಳೆ ಈ ವಿಷಯ ತಿಳಿಸಿದರು. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರ ರೂ. ಗಳಿಂದ 12 ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು ಎಂದರು.

ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬ ಮಾಸಾಶನ ಮೊತ್ತವನ್ನು ಮೂರು ಸಾವಿರ ರೂ. ಗಳಿಂದ ಆರು ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು ಎಂದರು.

Home add -Advt

Related Articles

Back to top button