Kannada NewsKarnataka News

*ಈಜುಕೊಳದಲ್ಲಿ ಜಂಪ್ ಮಾಡುವಾಗ ದುರಂತ: ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಈಜುಕೊಳದಲ್ಲಿ ಎತ್ತರದಿಂದ ಜಂಪ್ ಮಾಡಿದಾಗ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಆಟವಾಡಲು ಈಜುಕೊಳಕ್ಕೆ ಹೋಗಿದ್ದ. ಈ ವೇಳೆ ಇಂದ್ರೇಶ್ (17) ಎಂಬಾತ ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳದ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಎತ್ತರದಿಂದ ಡೈ ಹೊಡೆಯುವಾಗ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೆಲ ಸಮಯ ಈಜುಕೊಳದಲ್ಲಿ ಈಜಾಡಿದ ಇಂದ್ರೇಶ್ ಮೇಲಿನಿಂದ ಡೈ ಹೊಡೆದಿದ್ದಾನೆ. ಈ ವೇಳೆ ತಲೆಗೆ ಪೆಟ್ಟು ಬಿದ್ದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇಂದ್ರೇಶ್ ಕಾಣದಿದ್ದಾಗ ಸ್ನೇಹಿತರು ಆತಂಕದಿಂದ ಈಜುಕೊಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

Home add -Advt

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗೆ ಇಂದ್ರೇಶ್ ಈಜುಕೊಳದಲ್ಲೇ ಮುಳುಗಿರುವುದು ಕಂಡುಬಂದಿದೆ. ನಂತರ ಆತನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button