Latest

ಮನೆ ಬಾಗಿಲಿಗೆ ಮದ್ಯ; ಮನೆಹಾಳು ಐಡಿಯಾ ಕೈಬಿಡಬೇಕೆಂದು ಹೆಚ್ ಡಿಕೆ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಪನ್ಮೂಲ ಸಂಗ್ರಹಣೆಯಲ್ಲಿ ಅಬಕಾರಿ ಇಲಾಖೆ ಮುಗ್ಗರಿಸಿ ಬಿದ್ದಿದೆ. ಈಗ ಆನ್​ಲೈನ್ ಮೂಲಕ ‘ಮನೆ ಬಾಗಿಲಿಗೆ ಮದ್ಯ’ ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ ಚಿಂತನೆಯನ್ನು ಮಾಡಿದೆ. ಸರ್ಕಾರ ಈ ನಿರ್ಧಾರ ತಕ್ಷಣ ಕೈ ಬಿಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಳ್ಳಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯುವ ಬಗ್ಗೆ ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ಕೊರೊನಾ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

‘ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ’ ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ ಅಥವಾ ಆನ್​ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸರಿಯಲ್ಲ ಎಂದು ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Home add -Advt

Related Articles

Back to top button