Latest

ಪಿಎಸ್ ಐ ಅಕ್ರಮ; ಇಬ್ಬರು ಆರೋಪಿಗಳು ಎಸ್ಕೇಪ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪಕರಣದ ತನಿಖೆ ತೀವ್ರಗೊಂಡಿರುವಾಗಲೇ ಇಬ್ಬರು ಆರೋಪಿಗಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಶಾಂತಬಾಯಿ ಹಾಗೂ ಮಧ್ಯವರ್ತಿ ರವೀಂದ್ರ ಮೇಳಕುಂದಿ ನಾಪತ್ತೆಯಾಗಿರುವ ಆರೋಪಿಗಳು. ಈಗಾಗಲೇ ಸಿಐಡಿಯಿಂದ ಬಂಧನಕ್ಕೀಡಾಗಿರುವ ಮಂಜುನಾಥ್ ಮೇಳಕುಂದಿ ಸಹೋದರ ರವೀಂದ್ರ ಅಭ್ಯರ್ಥಿಗಳಿಮ್ದ ಹಣ ಪಡೆದು ಡೀಲ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಶಾಂತಾಬಾಯಿ 40 ಲಕ್ಷ ರೂಪಾಯಿ ಹಣ ಕೊಟ್ಟು ಬ್ಲೂಟೂತ್ ಮೂಲಕ ಅಕ್ರಮ ನಡೆಸಿ ಆಯ್ಕೆಯಾಗಿದ್ದಳು. ನಾಪತ್ತೆಯಾಗಿರುವ ಇಬ್ಬರು ಆರೋಪಿಗಳ ವಿರುದ್ಧ ವಾರೆಂಟ್ ಜಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ನಡೆಸಲಾಗಿದೆ.
ವಿಧಾನಸಭಾ ಚುನಾವಣೆ; ಆಪ್ ಸ್ಪರ್ಧಾಕಾಂಕ್ಷಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗುವಂತೆ ಕರೆ

Home add -Advt

Related Articles

Back to top button