ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ರಾಜ್ಯದ ಹಲವೆಡೆಗಳಲ್ಲಿ ಅರಣ್ಯಕ್ಕೆ ಬೆಂಕಿ ಆವರಿಸಿದ್ದು, ನಿಯಂತ್ರಿಸಲು ಹರಸಾಹಸ ನಡೆಸಲಾಗುತ್ತಿದೆ.
ಬಂಡಿಪುರ ಅರಣ್ಯದಲ್ಲಿ 20 ಸಾವಿರ ಹೆಕ್ಟೇರ್ ಗಳಿಗಿಂತ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ನಿಯಂತ್ರಿಸಲು ವಾಯುಪಡೆಯ 4 ಹೆಲಿಕಾಪ್ಟರ್ ನೆರವು ಪಡೆಯಲಾಗುತ್ತಿದೆ.
ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಅರಣ್ಯ ಪ್ರದೇಶಗಳಲ್ಲಿ ಸಹ ಬೆಂಕಿ ಕಾಣಿಸಿಕೊಂಡಿದೆ.
ಅರಣ್ಯ ಸಿಬ್ಬಂದಿ ಜೊತೆಗೆ ಸ್ಥಳೀಯ ಜನರು ಸಹ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ.
ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಬಂಡಿಪುರದಲ್ಲಿ ಬೀಡು ಬಿಟ್ಟಿದ್ದಾರೆ.
ಬಂಡಿಪುರ ಅರಣ್ಯದಲ್ಲಿ ಬೆಂಕಿಯ ರುದ್ರ ನರ್ತನ