CrimeKannada NewsKarnataka News

*ಮೈಸೂರು ಅರಮನೆ ಮುಂದೆ ಬ್ಲಾಸ್ಟ್: ದೇಹಗಳು ಛಿದ್ರ ಛಿದ್ರ*

ಪ್ರಗತಿವಾಹಿನಿ ಸುದ್ದಿ: ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಅರಮನೆಯ  ಮುಂಭಾಗದಲ್ಲೇ ಬಲೂನ್ ಗಳಿಗೆ ತುಂಬಿಸುವ ನೈಟ್ರೋಜನ್‌ ಗ್ಯಾಸ್‌ ಸ್ಪೋಟಗೊಂಡಿದೆ.

ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಆವರಣದಲ್ಲಿ ಬಲೂನುಗಳಿಗೆ ನೈಟ್ರೋಜನ್ ಗ್ಯಾಸ್ ತುಂಬಿಸುತ್ತಿದ್ದ ವೇಳೆ ಈ ಸ್ಪೋಟ ಉಂಟಾಗಿದೆ. ಈ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶ ಮೂಲದ ಸಲಿಂ ಮೃತ ದುರ್ದೈವಿ. ಬಲೂನು ಮಾರಾಟ ಮಾಡುತ್ತಿದ್ದ. ಹೀಲಿಂ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಪಂಪ್ ಮಾಡುವಾಗ ಒತ್ತಡದಿಂದಾಗಿ ಸ್ಫೋಟ ಸಂಭವಿಸಿದೆ.

Home add -Advt

ಸದ್ಯ ಗಾಯಾಳುಗನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕೃಷ್ಣರಾಜ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದಾರೆ.

Related Articles

Back to top button