Kannada NewsKarnataka NewsLatest

*ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ ಕೇಸ್; ಕಾರು ಪತ್ತೆ; ಆತಂಕ ಹುಟ್ಟಿಸಿದ ರಕ್ತದ ಕಲೆ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಮೂರು ದಿನಗಳಿಂದ ನಾಪತ್ತೆಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ, ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಅವರ ಕಾರು ರಾಮಾಪುರ ಗ್ರಾಮದ ಬಳಿ ಪತ್ತೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ಬಳಿ ಕಾರು ಪತ್ತೆಯಾಗಿದ್ದು, ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಇದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮಹದೇವಯ್ಯ ಅವರ ಸುಳಿವು ಸಿಕ್ಕಿಲ್ಲ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಡಿಸೆಂಬರ್ 2ರಂದು ಮಹದೇವಯ್ಯ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು.

Home add -Advt

Related Articles

Back to top button