Latest

ಸ್ಯಾಂಡಲ್ ವುಡ್ ನಟ ಚೇತನ್ ಗೆ ಮತ್ತೊಂದು ಸಂಕಷ್ಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆ ದಿನಗಳು ಖ್ಯಾತಿಯ ನಟ ಚೇತನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚೇತನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಬಸವನಗುಡಿ ಠಾಣೆ ಪೊಲೀಸರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಐಪಿಸಿ ಸೆಕ್ಷನ್ 153(A) ಅಡಿ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಈ ಹಿಂದೆ 2021 ಜೂನ್ 10ರಂದು ನಟ ಚೇತನ್ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿತ್ತು. ಐಪಿಸಿ ಸೆಕ್ಷನ್ 153(A) ಅಡಿಯಲ್ಲಿ ಕೇಸ್ ದಾಖಲಾಗಿತ್ತು. 153(A) ಅಡಿಯಲ್ಲಿ ಕೇಸ್ ದಾಖಲಾದರೆ ಚಾರ್ಜ್ ಶೀ ಸಲ್ಲಿಕೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ.

ಬ್ರಾಹ್ಮಣ ಸಮುದಾಯದ ಬಗ್ಗೆ ನಿಂದನೆ ಹಾಗೂ ಹಿಂದೂ ಸಮುದಾಯದಲ್ಲಿ ವಿಷಬೀಜ ಬಿತ್ತುವ ಹಾಗೆ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಈ ಹಿಂದೆ ಚೇತನ್ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಚೇತನ್ ನಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯ ಸರ್ಕಾರದ ಅನುಮತಿ ಕೋರಿ ಪತ್ರ ಬರೆಯಲಾಗಿದೆ.

Home add -Advt

Related Articles

Back to top button