Kannada NewsKarnataka NewsNationalTravel

*ಅಪಘಾತದ ರಭಸಕ್ಕೆ ಧಗಧಗಿಸಿದ ವಾಹನ: ನಾಲ್ವರ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಕಾರು ಮಿನಿ ಟ್ರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.

ಈ ಘಟನೆಯು ಉತ್ತರ ಪ್ರದೇಶದ ಅಲಿಗಢ ಬಳಿಯ ರಾಷ್ಟ್ರೀಯ ಹೆದ್ದಾರಿ 91 ರಲ್ಲಿ ಸಂಭವಿಸಿದೆ.‌ ಗಂಭೀರ ಗಾಯಗಳೊಂದಿಗೆ ಒಬ್ಬ ವ್ಯಕ್ತಿ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Home add -Advt

ಎರಡೂ ವಾಹನಗಳು ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಮುಖಾಮುಖಿ ಡಿಕ್ಕಿ ಹೊಡೆದು ಒಟ್ಟಿಗೆ ಸಿಲುಕಿಕೊಂಡವು. ಪರಿಣಾಮ ಇಂಧನ ಟ್ಯಾಂಕ್ ಛಿದ್ರಗೊಂಡು, ಬೆಂಕಿ ಕಾಣಿಸಿಕೊಂಡು ಎರಡೂ ವಾಹನಗಳು ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದವು. 

ದೇವಾಲಯಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ವಾಹನ ಧಗದಗಿಸಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Related Articles

Back to top button