Kannada NewsKarnataka NewsLatest
*ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಕೋಮುಗಲಭೆ ಸೃಷ್ಟಿಸುವ ಯತ್ನ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ ಸೈಬರ್ ಕ್ರೈಂ ಗೆ ದೂರು ನೀಡಿದೆ.
ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಯತ್ನ ನಡೆದಿದೆ. ತಕ್ಷಣ ಪುನೀತ್ ಕೆರೆಹಳ್ಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.



