Karnataka News
*BREAKING NEWS: ರಾಜ್ಯದ ಜನತೆಗೆ ಕರೆಂಟ್ ಶಾಕ್ ಕೊಟ್ಟ KERC*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನತೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ-ಕೆಇಆರ್ ಸಿ ಕರೆಂಟ್ ಶಾಕ್ ಕೊಟ್ಟಿದೆ. ವಿದ್ಯುತ್ ಬೆಲೆ ದಿಢೀರ್ ಏರಿಕೆ ಮಾಡಿ ಆದೇಶ ಹೊರಡಿಸಿದೆ.
ಪ್ರತಿ ಯೂನಿಟ್ ಗೆ 36 ಪೈಸೆಯಂತೆ ವಿದ್ಯುತ್ ದರ ಹೆಚ್ಚಳ ಮಾಡಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ್ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿ ಮಾಡಲು ಈ ಮೂಲಕ ಕೆಇಆರ್ ಸಿ ಮುಂದಾಗಿದೆ.
ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳವಾಗಿದ್ದು, ನೂತನ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ.



