Karnataka News

*ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದ ಅಧಿಕಾರಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿದ್ದ ಪುರಸಭೆ ಮುಖ್ಯಾಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಮೃತ ದುರ್ದೈವಿ. ಏ.20ರಂದು ಲಂಚ ಪಡೆಯುತ್ತಿದಾಗ ಲೋಕಾಯುಕ್ತ ಬಲೆಗೆ ಬಿದ್ದು, ಜೈಲು ಸೇರಿದ್ದರು. ಜೈಲಿನಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಿಮ್ಮರಾಜು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Home add -Advt

ಇ-ಖಾತೆ ಮಡಿಕೊಡಲು 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ತಿಮ್ಮರಾಜು, ಪುರಸಭೆ ಸದಸ್ಯ ಎನ್.ಶಾಂತಪ್ಪ ಬಳಿ 25 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದರು.

Related Articles

Back to top button