Karnataka News

*ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹನುಮರಹಳ್ಳಿಯಲ್ಲಿ ನಡೆದಿದೆ.

Home add -Advt

ಮೃತರನ್ನು ಸವಣೂರು ತಾಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ (23) ಹಾಗೂ ಸುದೀಪ ಕೋಟಿ (19) ಎಂದು ಗುರುತಿಸಲಾಗಿದೆ.

ಇಬ್ಬರು ಕಾರಿನಲ್ಲಿ ಬೇವಿನಹಳ್ಳಿಯಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲಕ್ಕೆ ಹೊರಟಿದ್ದರು. ಹಾವೇರಿ ಜಿಲ್ಲೆಯ ಹನುಮರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


Related Articles

Back to top button