Latest

ಇನ್ನೋರ್ವ ಶಾಸಕರ ಮನೆ ಮೇಲೆ ಕಲ್ಲು ತೂರಾಟ; 8 ಕಾರುಗಳ ಗಾಜು ಪುಡಿ ಪುಡಿ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಪಾಂಡವಪುರ ಶಾಸಕ ಸಿ.ಎಸ್.ಪುಟ್ಟರಾಜು ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳನ್ನು ಪುಡಿಗೈದಿದ್ದಾರೆ.

ನಿನ್ನೆ ತಡರಾತ್ರಿ ಶಾಸಕರ ಮನೆ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳ ಗುಂಪು ಈ ಕೃತ್ಯವೆಸಗಿದ್ದು, ಮನೆಯ ಹೊರಗಡೆ ನಿಂತಿದ್ದ 8 ಕಾರುಗಳ ಗಾಜುಗಳನ್ನು ಪುಡಿ ಪುಡಿ ಮಾಡಿ ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಕಿಡಿಗೇಡಿಗಳ ಕೃತ್ಯ ಸೆರೆಯಾಗಿದೆ.

Home add -Advt

ಶಾಸಕರ ಮನೆ ಮೇಲೆ ಕಲ್ಲುತೂರಾಟ ಪ್ರಕರಣ ಸಂಬಂಧ ಪಾಂಡವಪುರ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಹಬ್ಬದ ಸಂಭ್ರಮದಲ್ಲಿದ್ದ ಆಭರಣ ಪ್ರಿಯರಿಗೆ ಇಲ್ಲಿದೆ ಮಹತ್ವದ ಸುದ್ದಿ; ಚಿನ್ನ, ಬೆಳ್ಳಿ ದರ ಇಂದು ಎಷ್ಟಿದೆ ಗೊತ್ತೆ?

Related Articles

Back to top button