Kannada NewsKarnataka NewsLatest

ಕಲ್ಯಾಣರಾವ್ ಮುಚಳಂಬಿ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ  ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿ ನಿಧನರಾಗಿದ್ದಾರೆ

 ಜನ್ಮತಃ ಹೋರಾಟದ ಮನೋಭಾವದ ಕಲ್ಯಾಣರಾವ್ ಮುಚಳಂಬಿ , ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ‌ ಪಾಲ್ಗೊಂಡಿದ್ದರು.
ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿದರು.
ರಾಜ್ಯದ ರೈತ ಹೋರಾಟದಲ್ಲೇ ತಮ್ಮ ಜೀವನದ ಬಹುತೇಕ ಸಮಯ ಕಳೆದ ಮುಚಳಂಬಿ ಅವರು, ಪ್ರೋ ನಂಜುಡಸ್ವಾಮಿ, ಬಾಬಾಗೌಡ ಪಾಟೀಲ್, ಪುಟ್ಟಣ್ಣಯ್ಯ ಸೇರಿದಂತೆ ರೈತ ಹೋರಾಟಗಾರರಿಗೆ ಸಾಥ್ ನೀಡಿದ್ದರು.
 ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಗೆ ಬೆಳಗಾವಿಯ ಸದಾಶಿವನಗರ ಸ್ಮಶಾನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಂಜಯ್ ಪಾಟೀಲ್ ಅಣಕು ಶವಯಾತ್ರೆ ನಡೆಸಿದ ದಲಿತ ಸಂಘಟನೆಗಳು

Home add -Advt

Related Articles

Back to top button