Kannada NewsKarnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು; ಕುತೂಹಲ ಮೂಡಿಸಿದ ಚರ್ಚೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.

ಬೆಂಗಳೂರಿನ ಸದಾಶಿವನಗರ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಡಿ.ಕೆ.ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಈ ವೇಳೆ ಕೆಲ ಕಾಲ ಸಮಾಲೋಚನೆ ನಡೆಸಿದರು.

Home add -Advt

ರಾಜ್ಯದಲ್ಲಿ ಪಕ್ಷಾಂತರ ಪರ್ವ ವಿಚಾರ ಹಾಗು ಬಿಜೆಪಿ ನಾಯಕರು ಕಾಂಗ್ರೆಸ್ ಗೆಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿರುವಾಗಲೇ ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related Articles

Back to top button