Karnataka News

*ಟ್ಯೂಷನ್ ಮುಗಿಸಿ ಬರುತ್ತಿದ್ದ ವಿದ್ಯಾರ್ಥಿ ಮೇಲೆ 9 ಜನರಿಂದ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೇಲೆ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂಜೆ ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ವಿಧ್ಯಾರ್ಥಿ ಸೈಯದ್ ಇಶಾನ್ ಎಂಬಾತನ ಮೇಲೆ 9 ಜನರ ಗುಂಪೊಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಖಾದೀರ್, ನವಾಜ್, ಫಾರಜ್, ಮಸ್ತಾನ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

Home add -Advt

Related Articles

Back to top button