Latest

ಹೈಕಮಾಂಡ್ ಶಾಸಕರ ಅಭಿಪ್ರಾಯ ಕೇಳಲು ಅವಕಾಶವಿದೆ ಎಂದ ಶಾಸಕ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದ್ದರೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆರೋಗ್ಯವಾಗಿದ್ದವರಿಗೆ ವಯಸ್ಸು ಲೆಕ್ಕಕ್ಕೆ ಬರುವುದಿಲ್ಲ ಎಂದು ಶಾಸಕ, ಸರ್ಕಾರದ ಭರವಸೆಗಳ ಸಮಿತಿ ಅಧ್ಯಕ್ಷ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆ-ಜಿಲ್ಲೆಗಳಲ್ಲೂ ಪ್ರವಾಸ ನಡೆಸಿದ್ದಾರೆ. ಪ್ರವಾಹ, ಬರ, ಕೋವಿಡ್ ಮೊದಲ ಅಲೆ, ಎರಡನೇ ಅಲೆ, ಜನರ ಸಂಕಷ್ಟಕ್ಕೆ ಸ್ಪಂದನೆ, ಪ್ರತಿಯೊಂದು ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಎಂ ಬದಲಾವಣೆ ಅಗತ್ಯವೇ ಇಲ್ಲ ಎಂದರು.

ಯಡಿಯೂರಪ್ಪ ಪರ-ವಿರೋಧ ಸಹಿ ಸಂಗ್ರಹ ಮಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಸಹಿಸಂಗ್ರಹ ಮಾಡಲಾಗದು ಎಂದರು. ಶಾಸಕರನ್ನು ಕರೆದು ಹೈಕಮಾಂಡ್ ಅಭಿಪ್ರಾಯ ಕೇಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ವರಿಷ್ಠರು ಕ್ರಮ ಕೈಗೊಳ್ಳಬಹುದು. ಆದರೆ ಯಾರ್ಯಾರೋ ಶಾಸಕರ ಸಹಿ ಸಂಗ್ರಹ ಮಾಡಲಾಗದು. ಹಾಗೇ ಮಾಡಿದರೂ ನಾನು ಯಾವುದೇ ಸಹಿ ಹಾಕಲ್ಲ ಎಂದು ತಿಳಿಸಿದರು.
ಅನ್ ಲಾಕ್ ಪ್ರಕ್ರಿಯೆಗೆ ಸಿದ್ಧತೆ

Home add -Advt

Related Articles

Back to top button