Latest

*ಸಚಿವ ಅಶ್ವತ್ಥನಾರಾಯಣ ವಿರುದ್ಧ ಡಿ.ಕೆ.ಶಿವಕುಮಾರ್ ಕೆಂಡಾಮಂಡಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಾವ ಇತಿಹಾಸದಲ್ಲಿದೆ ಇಂತಹ ಹೇಳಿಕೆ? ಏನು ನಾಟಕ ನೋಡಿಕೊಂಡು ಬಂದ್ರಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಟಿಪ್ಪುವನ್ನು ಹೊಡೆದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಸಚಿವ ಅಶ್ವತ್ಥನಾರಾಯಣ ಮಾತಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಏನು ಟಗರಾ? ತಲೆ ತೆಗೆಯೋಕೆ? ಅಶ್ವತ್ಥನಾರಾಯಣ ಗೆ ನಾನು ಉತ್ತರ ಕೊಡಲ್ಲ, ಸಿಎಂ ಬೊಮ್ಮಾಯಿ ಮತ್ತು ಯಡಿಯೂರಪ್ಪ ಉತ್ತರ ಕೊಡಲಿ ಎಂದು ಹೇಳಿದರು.

ಬಚ್ಚಲು ವಿಚಾರ ಹೇಳಿ ನನ್ನ ಬಾಯಿ ಬಚ್ಚಲು ಮಾಡಿಕೊಳ್ಳಲ್ಲ. ಜನ ನಿರ್ಧಾರ ಮಾಡಲಿ ನಾನೆಕೆ ಸರ್ಟಿಫಿಕೇಟ್ ಕೊಡಲಿ. ಟಿಪ್ಪು ಬಗ್ಗೆ ರಾಷ್ಟ್ರಪತಿಗಳು ಸದನದಲ್ಲಿ ಏನು ಹೇಳಿದ್ದಾರೆಂಬ ದಾಖಲೆ ಇದೆ ಎಂದು ಹೇಳಿದರು.

*ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆಯತ್ನ ಆರೋಪ; ಮತ್ತೊಂದು ಕೇಸ್ ದಾಖಲು*

Home add -Advt

https://pragati.taskdun.com/ashwaththanarayanacase-filecongresss/

Related Articles

Back to top button