Belagavi NewsBelgaum NewsKarnataka NewsTravel

*ಯಾತ್ರಿಕರಿಗೆ ಗುಡ್ ನ್ಯೂಸ್ ನೀಡಿದ ಬೆಳಗಾವಿ ಸಾರಿಗೆ ಇಲಾಖೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025 ನೇ ಸಾಲಿನ ಶ್ರೀ ಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಯ ಪ್ರಯುಕ್ತ ಅಥಣಿ, ರಾಯಭಾಗ , ಗೋಕಾಕ, ಹುಕ್ಕೇರಿ ಹಾಗೂ ಚಿಕ್ಕೋಡಿ, ಸಂಕೇಶ್ವರ, ನಿಪ್ಪಾಣಿ  ಘಟಕಗಳಿಂದ ಪ್ರಾಸಂಗಿಕ ಕರಾರಿನ ಮೇಲೆ ಹಾಗೂ ಹೆಚ್ಚುವರಿ ಸಾರಿಗೆಗೆ ಸುಸಜ್ಜಿತ ವಾಹನಗಳನ್ನು ಒದಗಿಸಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ

ಗೋಕಾಕ – ಶ್ರೀಶೈಲ ಮತ್ತು  ಅಥಣಿ – ಶ್ರೀಶೈಲ ಮಾರ್ಗದ ವಿಶೇಷ ಸಾರಿಗೆಗಳನ್ನು ಆನ್ ಲೈನ್ ಬುಕ್ಕಿಂಗಾಗಿ ಅವಕಾಶ ಕಲ್ಪಿಸಲಾಗಿದೆ.

Home add -Advt

ಯಾತ್ರಾರ್ಥಿಗಳು ಶ್ರೀ ಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನದ ಜೊತೆಗೆ ಕೂಡಲಸಂಗಮ, ಬಾದಾಮಿ,  ಮಂತ್ರಾಲಯ , ಮಹಾನಂದಿ , ಬಸವಕಲ್ಯಾಣ ಮುಂತಾದ ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ.

ಪಾದ ಯಾತ್ರೆ ಹೋದಂತಹ ಭಕ್ತಾದಿಗಳಿಗೆ ಶ್ರೀಶೈಲದಿಂದ ಮರುಳಿ ಬರಲು ವಿಶೇಷ ವಾಹನಗಳ ಸೌಲಭ್ಯ ಒದಗಿಸಲಾಗಿದೆ.

ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಚಿಕ್ಕೋಡಿ ವಿಭಾಗದ ವಾ.ಕ.ರ.ಸಾ.ಸಂಸ್ಥೆ ವಿಭಾಗಿಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button