Kannada NewsLatest

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಚವಾಣ್ ಗಲ್ಲಿಯ ಶ್ರೀನಾಥ್ ದಿಗಂಬರ್ ಪವಾರ್ ಹಾಗೂ ಸದಾಶಿವನಗರದ ರಜಿತ್ ರಂಜನ್ ಡುಮಾವತ್ ಮೃತರು.

Home add -Advt

ಮೃತ ವಿದ್ಯಾರ್ಥಿಗಳು ಬೆಳಗಾವಿಯ ಲಿಂಗರಾಜ ಕಾಲೇಜಿನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರು ಸ್ನೇಹಿತರೊಂದಿಗೆ ಡಾಬಾದಲ್ಲಿ ಊಟ ಮುಗಿಸಿ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯ; ಇಂಧನ ಸಚಿವ ಸುನೀಲ್ ಕುಮಾರ್

Related Articles

Back to top button