Kannada NewsKarnataka NewsLatest
*ಬೆಳಗಾವಿ: ಮಹಾನಗರ ಪಾಲಿಕೆಗೆ ನೂತನ ಆಯುಕ್ತರ ನೇಮಕ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ನೂತನ ಆಯುಕ್ತರನ್ನು ನೇಮಕ ಮಾಡಿದೆ.
ಬೆಳಗಾವಿ ಪಾಲಿಕೆ ನೂತನ ಆಯುಕ್ತರಾಗಿ ಪಿ.ಎನ್.ಲೋಕೇಶ್ ಅವರನ್ನು ನೇಮಕಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎನ್.ಲೋಕೇಶ್ ಬಾಗಲಕೋಟೆ ಜಿಲ್ಲೆಗೆ ವಿಶೇಷ ಜಿಲ್ಲಾಧಿಕಾರಿಯಾಗಿದ್ದರು.
ಒಂದೆರಡು ದಿನಗಳಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.




