Kannada NewsKarnataka NewsLatestPolitics

*ಕಾಂಗ್ರೆಸ್ ಅಧಿಕಾರದ ಆಸೆಗಾಗಿ ಒಕ್ಕೂಟ ವ್ಯವಸ್ಥೆಗೆ ಕೈಜೋಡಿಸಿಲ್ಲ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಣಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿದ್ದು, ವಿಪಕ್ಷನಾಯಕರ ಮಹಾ ಮೈತ್ರಿಕೂಟ ಸಭೆ ನಡೆದಿದೆ.

ಸಭೆಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಗೆ ಅಧಿಕಾರ ಅಥವಾ ಪ್ರಧಾನಿ ಹುದ್ದೆ ಬಗ್ಗೆ ಆಸಕ್ತಿಯಿಲ್ಲ. ನಮ್ಮ ಉದ್ದೇಶ ಸಾಮಾಜಿಕ ನ್ಯಾಯ ಹಾಗೂ ಸಂವಿಧನ ರಕ್ಷಣೆ. ಈ ನಿಟ್ಟಿನಲ್ಲಿ ಮಹಾ ಮೈತ್ರಿಕೂಟದ ಜೊತೆ ಕೈಜೋಡಿಸಿದ್ದಾಗಿ ತಿಳಿಸಿದ್ದಾರೆ.

ಬಿಜೆಪಿ ತನ್ನ ಮಿತ್ರ ಪಕ್ಷಗಳನ್ನು ಒಗ್ಗೂಡಿಸುತ್ತಿದೆ. ಕಾಂಗ್ರೆಸ್ ಅಧಿಕಾರದ ಆಸೆಗಾಗಿ ಒಕ್ಕೂಟ ವ್ಯವಸ್ಥೆಗೆ ಕೈಜೋಡಿಸಿಲ್ಲ. ದ್ವೇಷ ರಾಜಕಾರಣದ ವಿರುದ್ಧ ಒಗ್ಗಟ್ಟಿನಿಂದ ನಾವು ಹೋರಾಡಬೇಕಿದೆ ಎಂದು ಹೇಳಿದ್ದಾಗಿ ತಿಳಿದುಬಂದಿದೆ.


Home add -Advt

Related Articles

Back to top button