Kannada NewsKarnataka NewsLatest

ಸಿಎಂ ಭೇಟಿಯಾದ ಬೆಳಗಾವಿ ಪಾಲಿಕೆ ನೂತನ ಸದಸ್ಯರು (ವಿಡೀಯೋ ಸಹಿತ)

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ 35  ಬಿಜೆಪಿ ಸದಸ್ಯರು ಇಂದು ಬೆಂಗಳೂರಿನಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ನೂತನ ಸದಸ್ಯರಿಗೆ ಬಸವರಾಜ ಬೊಮಮ್ಮಾಯಿ ಅಭಿನಂದನೆ ಸಲ್ಲಿಸಿದರು.  ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ. ಈ ಹಿನ್ನೆಲೆಯಲ್ಲಿ ಈ ಚುನಾವಣೆಯ ಜವಾಬ್ದಾರಿ ಹೊತ್ತಿದ್ದ ಶಾಸಕ ಅಭಯ ಪಾಟೀಲ ಅವರು ಪಾಲಿಕೆ ಸದಸ್ಯರನ್ನು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ, ಬಿ ಸಿ ಪಾಟೀಲ, ಬೈರತಿ ಬಸವರಾಜ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ಕವಟಗಿಮಠ ಮತ್ತು ಇತರರು ಉಪಸ್ಥಿತರಿದ್ದರು.

Home add -Advt

ಬೆಳಗಾವಿ ಪಾಲಿಕೆ ಮಾದರಿ ಮಾಡಲು ಅಭಯ ಪಾಟೀಲ ಸೂತ್ರ

ಸೋಮವಾರ ಪಾಲಿಕೆ ಸದಸ್ಯರಿಂದ ಸಿಎಂ ಭೇಟಿ – ಅಭಯ ಪಾಟೀಲ

Related Articles

Back to top button