Kannada NewsKarnataka NewsLatest
ಇಡಿ ಅಧಿಕಾರಿಗಳಿಂದ ಆನಂದ್ ಅಪ್ಪುಗೋಳ್ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾರ್ವಜನಿಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗೊಳ್ಳಿ ರಾಯಣ್ಣ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ, ಖ್ಯಾತ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಳಗಾವಿ ನಗರದಲ್ಲಿರುವ ಸಂಗೊಳ್ಳಿ ರಾಯಣ್ಣ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದ ಆನಂದ್ ಬಾಲಕೃಷ್ಣ ಅಪ್ಪುಗೋಳ್ ವಿರುದ್ಧ 250 ಕೋಟಿ ಸಾರ್ವಜನಿಕರ ಹಣ ವಂಚನೆ ಮಾಡಿದ ಆರೋಪ ಕೇಳಿಬಂದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ಅಧಿಕಾರಿಗಳು ಆನಂದ್ ಅಪ್ಪುಗೋಳ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಸ್ಫೋಟ


