Kannada News

ವಿದ್ಯುತ್ ಹರಿವು: ಸಾರ್ವಜನಿಕರಿಗೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಚಾಲ್ತಿಯಲ್ಲಿರುವ ೧೧೦ಕೆವಿ ಶಿರಗುಪ್ಪಿ ವಿದ್ಯುತ್ ಕೇಂದ್ರದಿಂದ ೧೧೦ಕೆವಿ ಕಾಗವಾಡ ವಿದ್ಯುತ್ ಕೇಂದ್ರ್ರದವರೆಗೆ ಜೋಡಿ ಗೋಪುರಗಳ ಮೇಲೆ ಹೊಸದಾಗಿ ೧೩.೦೧೯ ಕೀ.ಮಿ. ಉದ್ದದ ಒಂಟಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ.
೧೧೦ ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ, ಅಥಣಿ ಹಾಗೂ ಕಾಗವಾಡ ತಾಲೂಕಿನ ಕಾಗವಾಡ , ಶೇಡಬಾಳ ಶ್ರೀಧರಗಡ್ಡ ಶಿರಗುಪ್ಪಿ ಹಾಗೂ ಅಕ್ಕಪಕ್ಕದ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳು ಮತ್ತು ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.
ವಿದ್ಯುತ್ ಪ್ರಸರಣ ಮಾರ್ಗವನ್ನು ಏಪ್ರಿಲ್.೧೮ ೨೦೨೩ ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವದು ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಮಾಡಬಾರದು.
ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಬೆಳಗಾವಿ ಬೃಹತ್ ಕಾಮಗಾರಿ ವಿಭಾಗ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಾರ್ಯನಿರ್ವಾಹಕ ಅಭಿಯಂತರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://pragati.taskdun.com/dharmendra-pradhan-sanadan-failed-belgaum-rebellion-outbreak/

Home add -Advt

Related Articles

Back to top button