Karnataka News
*ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIAಗೆ ವಹಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ ಐಗೆ ವಹಿಸಿ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ರಸ್ತೆಯಲ್ಲಿ ಮೇ 1ರಂದು ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಪ್ರಮುಖ ಆರೋಪಿ ನೌಶಾದ್ ಸೇರಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಈ ಪ್ರಕರಣದ ತನಿಖೆಯನ್ನು ಗೃಹ ಸಚಿವಾಲಯ ಎನ್ ಐಎ ತನಿಖೆಗೆ ವಹಿಸಿ ಆದೇಶ ನೀಡಿದೆ.



