Latest

ರಾಸಾಯನಿಕ ಸೋರಿಕೆ; 150 ಮಕ್ಕಳು ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಹೊಸೂರು: ಕೆಮಿಕಲ್ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಸರ್ಕಾರಿ ಶಾಲೆಯ 150 ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

ಕಾರ್ಖಾನೆಯಲ್ಲಿ ಕೆಮಿಕಲ್ ಬಾಯ್ಲರ್ ಸ್ಫೋಟಗೊಂಡಿದ್ದು, ರಾಸಾಯನಿಕ ಸೋರಿಕೆಯಾಗಿದೆ. ಕಾರ್ಖಾನೆಯ ಬಳಿಯಿದ್ದ ಕಾರ್ಪೊರೇಷನ್ ಶಾಲೆಯ 150 ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ತೀವ್ರ ಉಸಿರಾಟದ ಸಮಸ್ಯೆಯಿಂದ ನರಳುತ್ತಿದ್ದು, ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೃಷ್ಣಗಿರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆರೆಗೆ ಉರುಳಿದ ಬೈಕ್; ಗರ್ಭಿಣಿ ದುರ್ಮರಣ

Home add -Advt

https://pragati.taskdun.com/latest/mysorebike-accidentwoman-death/

Related Articles

Back to top button