Kannada NewsLatestNational

*ರಾಜಭವನ ಆವರಣಕ್ಕೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ*

ಆರೋಪಿ ಅರೆಸ್ಟ್


ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳುನಾಡಿನ ರಾಜಭವನ ಆವರನಕ್ಕೆ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ.

ಚೆನ್ನೈನಲ್ಲಿ ರಾಜಭವನದ ಆವರಣದಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಂಧಿತನನ್ನು ಕರುಕ್ಕ ವಿನೋದ್ ಎಂದು ಗುರುತಿಸಲಾಗಿದೆ.

ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮೊದಲಿನಿಂದ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿಗೆ ಈ ಘಟನೆ ಮತ್ತಷ್ಟು ವಾಕ್ಸಮರಕ್ಕೆ ಕಾರಣವಾಗಿದೆ. ರಾಜಭವನದ ಆವರಣದಲ್ಲಿಯೇ ಪೆಟ್ರೋಲ್ ಬಾಂಬ್ ಎಸೆಯಲಾಗಿದ್ದು, ಇದು ತಮಿಳುನಾಡಿನ ಕಾನೂನು ಸುವ್ಯವಸ್ಥೆಯನ್ನು ನಿಜವಾಗಿ ಪ್ರತಿಬಿಂಬಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button