Latest

*ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಹಾಗೂ ಮುಂಬಡ್ತಿ ಶೀಘ್ರ ಆರಂಭಿಸಲು ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ, ವರ್ಗಾವಣೆ ಹಾಗೂ ಮುಂಬಡ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.

ಈಗಾಗಲೇ ಅವೈಜ್ಞಾನಿಕ-ತಾಂತ್ರಿಕ ಕಾರಣಗಳಿಂದಾಗಿ ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಗಳನ್ನು ನಿಲ್ಲಿಸಲಾಗಿದೆ. ಮುಂದಿನ ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸರ್ಕಾರಕ್ಕೆ ಸೂಚಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದು, ಶಿಕ್ಷಕರ ವರ್ಗಾವಣೆ ಸಂದರ್ಭದಲ್ಲಿ ಈ ಕೆಳಕಂಡ ಅಂಶಗಳನ್ನು ಅನುಸರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

ಹೆಚ್ಚುವರಿ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ನಿಗದಿತ ವೇಳಾಪಟ್ಟಿಯಂತೆ ಆರಂಭಿಸುವುದು, ಶಿಕ್ಷಕರಿಗೆ ಮುಂಬಡ್ತಿ ನೀಡುವುದು ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಕೆಲ ಮನವಿಯನ್ನು ಮಾಡಿದ್ದು, ಮನವಿ ಅಂಶಗಳು ಈ ಕೆಳಗಿನಂತಿವೆ.

*ಸಿದ್ದರಾಮಯ್ಯನವರ ಶ್ರೀನಗರ ಪ್ರವಾಸ ದಿಢೀರ್ ರದ್ದು*

https://pragati.taskdun.com/siddaramaiahshreenagara-visitcancelledbharat-jodo-yatre/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button