Latest

*ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ; ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನುದಾನಿತ ಶಾಲಾ ಶಿಕ್ಷಕರ ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕರೊಬ್ಬರು ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಸಾವಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿಕ್ಷಕ ಶಂಕರಪ್ಪ ಬೋರಡ್ಡಿ (47) ಮೃತರು. ಶಂಕರಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರಾಗಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅನುದಾನಿತ ಶಾಲಾ ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಳಿಕ ತಡರಾತ್ರಿ ಶಿಕ್ಷಕ ಶಂಕರಪ್ಪ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತೆರಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಶಿಕ್ಷಕನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Home add -Advt

*ವಿಮಾನ ಆಯ್ತು ಈಗ KSRTC ಬಸ್ ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಸಹ ಪ್ರಯಾಣಿಕ*

https://pragati.taskdun.com/ksrtc-busurinationgirlmangalore-vijayapura-bus/

Related Articles

Back to top button