
ಪ್ರಗತಿವಾಹಿನಿ ಸುದ್ದಿ, ದೆಹಲಿ: ಚೆನ್ನೈನಿಂದ ತಿರುಚನಾಪಳ್ಳಿಗೆ ಸಾಗುತ್ತಿದ್ದ ಇಂಡಿಗೊ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ಸಂಸದ ತೇಜಸ್ವಿ ಸೂರ್ಯ ತಪ್ಪಿಗೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತೇಪೆ ಹೊಡೆದಿದ್ದಾರೆ.
ವಿಮಾನ ಹಾರಾಟಕ್ಕೆ ಅಣಿಯಾಗುತ್ತಿದ್ದ ವೇಳೆ ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ತೆರೆದಿದ್ದು ನಿಜ, ಎಲ್ಲ ರೀತಿಯ ತಪಾಸಣೆಗಳ ನಂತರ ವಿಮಾನ ಹಾರಾಟಕ್ಕೆ ಅನುಮತಿಸಲಾಗಿದೆ. ವಿಮಾನ ಯಾನ 2 ತಾಸು ವಿಳಂಬವಾಗಿದ್ದು ನಿಜ. ಆನಂತರ ಅವರು ಕ್ಷಮೆ ಯಾಚಿಸಿದ್ದಾರೆ ಎಂದು ಸಚಿವರು ಮಾಧ್ಯಮಗಳೆದುರು ಹೇಳಿದ್ದಾರೆ.
SOP (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ಪ್ರಕಾರ, ಘಟನೆಯನ್ನು ದಾಖಲಿಸಲಾಗಿದೆ. ತೇಜಸ್ವಿ ಸೂರ್ಯ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮಾತ್ರ ವಾಗ್ದಾಳಿ ನಿಲ್ಲಿಸಿಲ್ಲ. ಜಾಲತಾಣಗಳಲ್ಲೂ ಟ್ರೋಲ್ ಆರಂಭಿಸಿದ್ದು ಇಂಡಿಗೊ ಪ್ರಯಾಣಿಕನ ಹೆಸರನ್ನು ಬಹಿರಂಗಪಡಿಸದಿರುವುದು ಏಕೆ? ಎಂದು ಪ್ರಶ್ನಿಸಿವೆ.
ಆಹಾರ ಪದ್ಧತಿಯಲ್ಲಿನ ತಪ್ಪು ತಿಳಿವಳಿಕೆ ಮತ್ತು ಅವೈಜ್ಞಾನಿಕ ನಂಬಿಕೆಗಳು
https://pragati.taskdun.com/misconceptions-and-unscientific-beliefs-in-dieting/
https://pragati.taskdun.com/man-died-in-accident-in-belagavi/
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಟೀಮ್ ಸಮಾವೇಶ; ಡಬಲ್ ಗಿಫ್ಟ್ ಕೊಡ್ತಾರಾ ಮಾಜಿ ಸಚಿವ?
https://pragati.taskdun.com/said-i-would-give-a-double-gift-but-in-the-end-i-will-give-it-once-ramesh-jarakiholi/